“ಬೆಂಗಳೂರು: ಪತ್ನಿಗೆ ಕ್ಷಮಿಸು ಎಂದು ಡೆತ್ನೋಟ್ ಬರೆದಿಟ್ಟು ಉದ್ಯಮಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕಲಾಲ್ ದತ್ತ (40) ಮೃತ ಉದ್ಯಮಿ. ಅಕ್ಷಯನಗರದ ಉದ್ಯಮಿ ಆಗಿರುವ ದತ್ತ ಬಡ್ಡಿ ಟಾರ್ಚರ್ಗೆ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಇದರಲ್ಲಿ ಪತ್ನಿಗೆ ಕ್ಷಮೆ ಕೇಳಿದ್ದಾರೆ. ಜೊತೆ ಸಾಲದ ಬಡ್ಡಿಯ ಟಾರ್ಚರ್ಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬ್ಯುಸಿನೆಸ್ ಪಾರ್ಟನರ್ ವಿರುದ್ಧ ಮೃತ ಕಲಾಲ್ ದತ್ತ ಪತ್ನಿ ಸಜಿನಿ ದೂರು ದಾಖಲಿಸಿದ್ದಾರೆ. ದೂರಿನಲ್ಲಿ 2016 ರಿಂದ ಮೃತ ಕಲಾಲ್ ದತ್ತ ಹಾಗೂ ಎಜಿ ಮರಿಸ್ವಾಮಿ ಎನ್ನುವರು ಸೇರಿಕೊಂಡು ಸಾಯಿ ಫೆಸಿಲಿಟಿ ಸರ್ವೀಸಸ್ ಕಂಪನಿ ನಡೆಸುತ್ತಿದ್ದರು. ಈ ವೇಳೆ ಮರಿಸ್ವಾಮಿ ಸುಮಾರು ನಾಲ್ಕು ಕೋಟಿ ಹಣ ಪಡೆದು ವಂಚನೆ ಮಾಡಿರುವುದಾಗಿ ತಿಳಿಸಿದ್ದಾರೆ.”