ಗೋಕಾಕ: ಸಮೀಪದ ಸುಕ್ಷೇತ್ರ ಹುಣಶ್ಯಾಳ ಪಿ.ಜಿ ಗ್ರಾಮದ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದ ಅಧಿಪತಿಗಳಾದ ಶ್ರೀ ನಿಜಗುಣದೇವ ಮಹಾಸ್ವಾಮಿಗಳರವರ ಗುರುಗಳಾದ ಸಿದ್ಧಿಪುರುಷ ಮಧುರಖಂಡಿಯ ಕಮರಿಮಠಾಧೀಶ ಶ್ರೀ ಸಿದ್ಧಲಿಂಗ ಯತಿರಾಜರ ೪೩ನೇ ಮತ್ತು ಮಾತೋಶ್ರೀ ಚಂಪಮ್ಮತಾಯಿಯವರ ೪ನೇ ಪುಣ್ಯಾರಾಧನೆ ಕಾರ್ಯಕ್ರಮವು ದಿ. ೭ ರಂದು ಮುಂಜಾನೆ ೧೦ ಗಂಟೆಗೆ ಹುಣಶ್ಯಾಳ ಪಿ.ಜಿ ಗ್ರಾಮದ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಜರುಗಲಿದೆ.
ಲಚ್ಯಾಣದ ಶ್ರೀ ಸಿದ್ಧಲಿಂಗ ಮಹಾರಾಜರ ಕೃಪೆಯನ್ನು ಹೊಂದಿ ದೇವಿಯ ಅನುಗ್ರಹದಿಂದ ವಾಕಸಿದ್ಧಿ ಹಾಗೂ ಪವಾಡ ಪುರುಷರಾಗಿದ್ದ ಸಿದ್ಧಲಿಂಗ ಮಹಾರಾಜರು ಅನ್ನದಾಸೋಹ, ಜ್ಞಾನದಾಸೋಹ ನಡೆಸುತ್ತ ಮುಗಳಖೋಡದ ಸದ್ಗುರು ಶ್ರೀ ಯಲ್ಲಾಲಿಂಗ ಮಹಾರಾಜರ ಜೊತೆ ಇಡೀ ಭಾರತ ದೇಶವನ್ನು ಕಾಲ್ನಡೆಗೆಯಲ್ಲಿ ಸಂಚರಿಸಿ ತೀರ್ಥಯಾತ್ರೆ ಮಾಡಿ ಭಕ್ತರಪಾಲಿಗೆ ಕಾಮಧೇನು ಕಲ್ಪವೃಕ್ಷ ಆಗಿದ್ದರು.
ಶ್ರೀಮಠದ ಅಧಿಪತಿ ನಿಜಗುಣದೇವ ಮಹಾಸ್ವಾಮಿಗಳು ಪಾವನ ಸನ್ನಿಧಿ ವಹಿಸಲಿದ್ದು, ಅಧ್ಯಕ್ಷತೆ ಶಿರೋಳ ಪ್ರಣವಾಶ್ರಮದ ಪೂಜ್ಯ ಶ್ರೀ ಯಮುನಾನಂದ ಸ್ವಾಮಿಗಳು ವಹಿಸುವರು. ಮುಖ್ಯ ಅತಿಥಿಗಳಾಗಿ ಮಧುರಖಂಡಿಯ ಪೂಜ್ಯ ಶ್ರೀ ಬಸಯ್ಯ ಸ್ವಾಮಿಗಳು, ಯರಝರವಿಯ ಪೂಜ್ಯ ಶ್ರೀ ಚಿದಾನಂದ ಮಹಾಸ್ವಾಮಿಜಿ, ಆಗಮಿಸುವರು. ಬೆಳಿಗ್ಗೆ ಗದ್ದುಗೆಗೆ ಮಹಾರುದ್ರಾಭಿಷೇಕ ಸುಮಂಗಲಿಯರ ಕಳಸ ಆರತಿ, ವಾದ್ಯ ವೈಭವದೊಂದಿಗೆ ಪಲ್ಲಕ್ಕಿಯಲ್ಲಿ ಶ್ರೀಗಳ ಭಾವಚಿತ್ರದ ಭವ್ಯ ಮೆರವಣಿಗೆ, ಶಿವಾನುಭಾವ, ಬಸಪ್ಪ ಸೋಮನಟ್ಟಿ ಇವರಿಂದ ಅನ್ನದಾಸೋಹ ಜರುಗಲಿದೆ. ಶ್ರೀ ಸಿದ್ದಲಿಂಗೇಶ್ವರ ಭಜನಾ ಮಂಡಳಿ ಇವರಿಂದ ಸಂಗೀತ ಸೇವೆ, ಮಲ್ಲಪ್ಪ ಲಕ್ಷೆö್ಮÃಶ್ವರ ಇವರಿಂದ ಚಿಂತನ ಸೇವೆ ಜರುಗಲಿದೆ.
ಮಾತೋಶ್ರೀ ಚಂಪಮ್ಮತಾಯಿಯವರ ಪುಣ್ಯ ಸ್ಮರಣೋತ್ಸವ
ಸದ್ಗುರು ಸಿದ್ದಲಿಂಗ ಯತಿರಾಜರ ಮಗಳಾದ ಮಧುರಖಂಡಿಯ ಮಾತೋಶ್ರೀ ಚಂಪಮ್ಮತಾಯಿಯವರು ೪ನೇ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮವು ತಾಲೂಕಿನ ಹುಣಶ್ಯಾಳ ಪಿಜಿ ಶ್ರೀ ಸಿದ್ದಲಿಂಗ ಕೈವಲ್ಯಾಶ್ರಮದಲ್ಲಿ ದಿ.೭ ಜರುಗಲಿದೆ.
ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಅಭಿಷೇಕ, ಮಹಾತ್ಮರಿಂದ ಸಭೆ, ಭಜನಾ ಕಾರ್ಯಕ್ರಮ, ಮಹಾಪ್ರಸಾದ ಜರುಗಲಿದ್ದು ಭಕ್ತ ಸಮೂಹವು ಪಾಲ್ಗೊಳ್ಳಬೇಕೆಂದು ಶ್ರೀ ಸಿದ್ದಲಿಂಗ ಕೈವಲ್ಯಾಶ್ರಮದ ಪೀಠಾಧಿಪತಿ ಪೂಜ್ಯ ಶ್ರೀ ನಿಜಗುಣ ದೇವ ಮಹಾಸ್ವಾಮಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.